ಬಿ. ಸುಷ್ಮಾ : ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ…

ಬಳ್ಳಾರಿ / ಕಂಪ್ಲಿ : ರಾಷ್ಟ್ರೀಯ ಮತದಾನ (NVD) ದಿನಾಚರಣೆಯ ಪ್ರಯುಕ್ತ ದಿನಾಂಕ 24/12/2025 ಬುಧುವಾರರಂದು ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ. ಕಾಂ. ದ್ವಿತೀಯ ವರ್ಷದ ವಿದ್ಯಾರ್ಥಿನಿ ಬಿ. ಸುಷ್ಮಾ ಪ್ರಥಮ ಸ್ಥಾನಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಂಪ್ಲಿ ಮಹಾವಿದ್ಯಾಲಯಕ್ಕೆ ಮತ್ತು ಕಂಪ್ಲಿ ತಾಲೂಕಿಗೆ ಹೆಮ್ಮೆ ತಂದಿದ್ದಾಳೆ.

ಈ ವಿದ್ಯಾರ್ಥಿನಿಗೆ ಕಾಲೇಜಿನ ಪ್ರಾಚಾರ್ಯರು, ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್…
