ಗವಿ ಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ…

ಕೊಪ್ಪಳ ಜಿಲ್ಲೆ,.. ಕೊಪ್ಪಳ ನಗರದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಅವರ ಕೊಲೆಯನ್ನು ಖಂಡಿಸಿ ದಿನಾಂಕ 11.08.2025 ಸೋಮವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಹಾಗೂ ನೊಂದ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸರ್ಕಾರದ ವತಿಯಿಂದ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಮತ್ತು ಕುಟುಂಬದ ಮಹಿಳೆಗೆ ಸರ್ಕಾರದ ಉದ್ಯೋಗ ಒದಗಿಸಿ ಕೊಡಬೇಕೆಂದುಕರ್ನಾಟಕ ಮಾನ್ಯ ರಾಜ್ಯಪಾಲರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸುವುದರ ಜೊತೆಗೆ ಒತ್ತಾಯಿಸುತಿದ್ದೇವೆ ಈ ಕಾರ್ಯಕ್ರಮದಲ್ಲಿ ಗಂಗಾವತಿ ತಾಲೂಕಿನ ಸಮಸ್ತ ಸಮಾಜದ ಬಂಧುಗಳು ಹಿರಿಯರು ಯುವ ಮುಖಂಡರು ಮಹಿಳೆಯರು ವಿದ್ಯಾರ್ಥಿಗಳು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಅಧ್ಯಕ್ಷ ವೀರಭದ್ರಪ್ಪ ನಾಯಕ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

