ಎಸ್‌ಕೆಎನ್‌ಜಿ ಕಾಲೇಜಿನ ಪ್ರಾಧ್ಯಾಪಕ ಗುರಿಕಾರ್‌ಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್…

ಎಸ್‌ಕೆಎನ್‌ಜಿ ಕಾಲೇಜಿನ ಪ್ರಾಧ್ಯಾಪಕ ಗುರಿಕಾರ್‌ಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್…

ಗಂಗಾವತಿ.13 ನಗರದ ಶ್ರೀ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ|| ಶಿವರಾಜ್ ಜಿ.ಗುರಿಕಾರ್ ಅವರಿಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್ ದೊರೆತಿದೆ. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಸೆ.೧೭ ರಂದು ದೆಹಲಿ ಕನಸ್ಟೋನ್ ಆಫ್ ಇಂಡಿಯಾದಲ್ಲಿ ಅವಾರ್ಡ್‌ನ್ನು ಪ್ರಧಾನ ಮಾಡಲಿದ್ದಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಸೇರಿದಂತೆ ಬಹುಭಾಷೆಯಲ್ಲಿ ಗುರಿಕಾರ್ ಅವರು ಅನೇಕ ಲೇಖನಗಳನ್ನು ಬರೆದಿದ್ದಾರೆ. ಯಲಬುರ್ಗಾ ಸರಕಾರದ ಪದವಿ ಮಹಾವಿದ್ಯಾಲಯದಲ್ಲಿ ಹತ್ತು ವರ್ಷ ಸೇವೆ ಸಲ್ಲಿಸಿ ಪ್ರಭಾರಿ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರಲ್ಲದೇ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಕನ್ನಡದ ಸೇವೆ ಮಾಡಿದ್ದಾರೆ. ಎರಡು ಕವನ ಸಂಕಲನ ಮತ್ತು ಎರಡು ಭೌತಶಾಸ್ತ್ರದಲ್ಲಿ ಸಂಶೋಧನಾ ಪುಸ್ತಕಗಳನ್ನು ಹೊರ ತಂದಿದ್ದಾರೆ. ಬೀಚಿ ಬಳಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ ಹೆಚ್ಚಿನ ಅನುಭವ ಹೊಂದಿದ್ದಾರೆ. ಇವರ ಸಾಹಿತ್ಯ, ಶಿಕ್ಷಣ ಮತ್ತಿತರ ಸೇವೆಯನ್ನು ಗುರುತಿಸಿ ಸಾಹಿತ್ಯ ಸೇವಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಗೆ ಭಾಜನರಾಗಿರುವ ಸಹ ಪ್ರಾಧ್ಯಾಪಕ ಡಾ|| ಶಿವರಾಜ ಗುರಿಕಾರ್ ಅವರನ್ನು ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ವೃಂದ ಮತ್ತು ಅಭಿಮಾನಿ ಬಳಗ ಅಭಿನಂದಿಸಿದೆ.

Leave a Reply

Your email address will not be published. Required fields are marked *